ಪುತ್ರ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ-ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದ ಅನಿತಾ ಕುಮಾರಸ್ವಾಮಿ

ಮಂಡ್ಯ, ಫೆ.26- ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯಕ್ಕಾಗಿ ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣ ಹೊರವಲಯದಲ್ಲಿರುವ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅನಿತಾ ಕುಮಾರಸ್ವಾಮಿ ಅವರು ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದರು.

ನಿಖಿಲ್‍ಗೆ ಟಿಕೆಟ್ ಸಿಕ್ಕಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಅವರು ಪ್ರಾರ್ಥಿಸಿದರು. ಹೊಳೆ ಆಂಜನೇಯಸ್ವಾಮಿ ದೇಗುಲಕ್ಕೆ ಒಂದುಕಾಲು ರೂಪಾಯಿ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಎಂಬ ನಂಬಿಕೆ ಇದೆ. ಹಾಗಾಗಿ ಅನಿತಾ ಕುಮಾರಸ್ವಾಮಿ ಅವರು ಇಂದು ತಮ್ಮ ಪುತ್ರನಿಗಾಗಿ ಈ ಹರಕೆ ಸಲ್ಲಿಸಿದರು.

ಪೂಜೆ ನಂತರ ನಿಖಿಲ್‍ಗೆ ಎಲ್ಲ ರೀತಿಯ ಒಳಿತಾಗಲಿ ಎಂದು ಹರಕೆ ಸಲ್ಲಿಸಿರುವುದಾಗಿ ಹೇಳಿದರು.ರಾಜಕೀಯ ಭವಿಷ್ಯಕ್ಕಾಗಿಯೇ ಅನಿತಾ ಕುಮರಾಸ್ವಾಮಿ ಹರಕೆ ಹೊತ್ತಿದ್ದಾರೆ ಎಂದು ಮಂಡ್ಯ ಜನರು ಚರ್ಚೆ ಪ್ರಾರಂಭಿಸಿದ್ದಾರೆ.

ಸುಮಲತಾ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಜೆಡಿಎಸ್ ಬೆಲ್ಟ್. ಹಾಗಾಗಿ ಅವರ ಸ್ಪರ್ಧೆ ಬಗ್ಗೆ ಮಾತನಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ