ಮರಕ್ಕೆ ಡಿಕ್ಕಿ ಹೊಡೆದ ಬೈಕ್-ಘಟನೆಯಲ್ಲಿ ಬೈಕ್ ಸವಾರನ ಸಾವು

ಮಳವಳ್ಳಿ, ಮಾ.1-ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಿರಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ನಿವಾಸಿ ವಿಜಯಕುಮಾರ್(27) ಮೃತಪಟ್ಟ ಸವಾರ.

ವಿಜಯಕುಮಾರ್ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದು, ನಿನ್ನೆ ಕೆಲಸ ನಿಮಿತ್ತ ಬೈಕ್‍ನಲ್ಲಿ ಮಂಡ್ಯಕ್ಕೆ ತೆರಳಿದ್ದನು. ರಾತ್ರಿ ಸ್ವಗ್ರಾಮಕ್ಕೆ ಹಿಂತಿರುಗುವಾಗ ಮಳವಳ್ಳಿ ತಾಲೂಕಿನ ಎಚ್.ಎಚ್.ಕೊಪ್ಪಲು ಬಳಿ ಬೈಕ್‍ನ ಆಯತಪ್ಪಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ತೀವ್ರ ಪೆಟ್ಟು ಬಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಶವವನ್ನು ಮಳವಳ್ಳಿ ಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಸಂಬಂಧ ಕಿರಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ