ಯುವಕನ ಮೇಲೆ ಹಲ್ಲೆ ನಡೆಸಿದ ಗುಂಪು

ಬೆಂಗಳೂರು, ಮಾ.1- ಗುಂಪೊoದು ಯುವಕನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಲ್ಲೆಯಿಂದ ಗಾಯಗೊಂಡಿರುವ ಚಂದ್ರಶೇಖರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಕ್ಷ್ಮೀನಾರಾಯಣಪುರದ ಮಾರ್ಕೆಟ್ ಬಳಿ ರಾತ್ರಿ 8.30ರ ಸಮಯದಲ್ಲಿ ಚಂದ್ರಶೇಖರ್ ಬರುತ್ತಿದ್ದಾಗ ಮೂರ್ನಾಲ್ಕು ಮಂದಿಯ ಗುಂಪು ಏಕಾಏಕಿ ಲಾಂಗ್‍ನಿಂದ ತಲೆ, ಕೈ-ಕಾಲಿಗೆ ಮನಬಂದಂತೆ ಹಲ್ಲೆ ಮಾಡಿ ಪರಾರಿಯಾಗಿದೆ.

ಇತ್ತೀಚೆಗೆ ನಡೆದ ಉತ್ಸವ ಸಂದರ್ಭದಲ್ಲಿ ಡ್ಯಾನ್ಸ್ ಮಾಡುವ ವಿಚಾರವಾಗಿ ನಾಲ್ಕೈದು ಮಂದಿ ಚಂದ್ರಶೇಖರ್ ಜತೆ ಜಗಳವಾಡಿದ್ದರು. ಅದೇ ದ್ವೇಷದಲ್ಲಿ ಬಂದು ರಾತ್ರಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಅದೃಷ್ಟವಶಾತ್ ಚಂದ್ರಶೇಖರ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶ್ರೀರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ