ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಕೊಳ್ಳೇಗಾಲ, ಮಾ.3- ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಸಾವನ್ನಪ್ಪಿ ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಮಹದೇಶ್ವರ ಬೆಟ್ಟ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಡಕೆ ಹಳ್ಳ ಗ್ರಾಮದ ಮಾದೇಶ್ (50) ಎಂಬಾತ ಮೃತ ದುರ್ದೈವಿ.

ಮಲೆ ಮಹದೇಶ್ವರ ಬೆಟ್ಟದ ಕಡೆಗೆ ಕೆಎಸ್‍ಆರ್‍ಟಿಸಿ ಬಸ್ ತೆರಳುತ್ತಿತ್ತು. ಮಾದೇಶ್ ಹಾಗೂ ಕುರಟ್ಟಿ ಹೊಸೂರಿನ ಮಹದೇವ ಇಬ್ಬರೂ ಟಿವಿಎಸ್ ಎಕ್ಸೆಲ್‍ನಲ್ಲಿ ಕೌದಳ್ಳಿ ಕಡೆ ತೆರಳುತ್ತಿದ್ದಾಗ ಡಿಕ್ಕಿ ಹೊಡೆದ ಪರಿಣಾಮ ಮಾದೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಹಿಂಬದಿ ಕುಳಿತಿದ್ದ ಕುರಟ್ಟಿ ಹೊಸೂರಿನ ಮಹದೇವ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ಬಂಧಿಸಿ ಬಸ್ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ