ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿ-ಸಚಿವ ಸಾ.ರಾ.ಮಹೇಶ್

ಮೈಸೂರು, ಮಾ.3- ಮಂಡ್ಯ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದರು.

ಕೆಆರ್ ನಗರ ತಾಲೂಕಿನ ಹಾರಂಬಳ್ಳಿ ಗ್ರಾಮದ ಜನಸಂಪರ್ಕ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಈಗಾಗಲೇ ತೀರ್ಮಾನಿಸಲಾಗಿದೆ ಎಂದರು.

ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಭ್ಯರ್ಥಿಯಾಗುವಂತೆ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಒತ್ತಾಯಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ