ತಾಕತ್ತಿದ್ದರೆ ಪ್ರಧಾನಿ ಮೋದಿಯವರನ್ನು ಗುಂಡಿಟ್ಟು ಕೊಲ್ಲಿ ಎಂದ ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಗುಂಡಿಟ್ಟು ಕೊಲ್ಲಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಳೂರು ಗೋಪಾಲಕೃಷ್ಣ ನೀಡಿದ ಹೇಳಿಕೆಯ ವೀಡಿಯೋವನ್ನು ರಾಜ್ಯ ಬಿಜೆಪಿ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಪ್ರಧಾನಿ ಮೋದಿ ಅವರ ಹತ್ಯೆ ಮಾಡುವಂತೆ ಕಾಂಗ್ರೆಸ್‌ ನಾಯಕರು ಪ್ರಚೋದಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್‌ ನಾಯಕ ಬೇಳೂರು ಗೋಪಾಲಕೃಷ್ಣ ಪಕ್ಷದ ಅಧಿಕೃತ ಸಭೆಯಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ದೇಶದ ಪ್ರದಾನಿಯನ್ನು ಹತ್ಯೆ ಮಾಡುವಂತೆ ಕರೆ ನೀಡಿದ್ದಾರೆ. ದೇಶದ ಪ್ರಧಾನಿಯ ಹತ್ಯೆಗೆ ಪ್ರಚೋದನೆ ನೀಡಿರುವ ಮುಖಂಡನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹಸಚಿವರು ಹಾಗೂ ರಾಜ್ಯ ಪೊಲೀಸ್‌ ಇಲಾಖೆಯನ್ನು ಆಗ್ರಹಿಸುತ್ತಿದ್ದೇವೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ಬೇಳೂರು ಗೋಪಾಲಕೃಷ್ಣ ಅವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ಗೆ ಬಿಜೆಪಿ ದೂರು ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ