ಪುಲ್ವಾಮಾದಲ್ಲಿ ಭಾರತೀಯ ಸೇನೆಯಿಂದ ಎನ್​ಕೌಂಟರ್; ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಮುಂಜಾನೆ ಭಾರತೀಯ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ​ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮಾದ ತ್ರಾಲ್​ನಲ್ಲಿ ಭಾರತೀಯ ಭದ್ರತಾಪಡೆಯ ಸಿಬ್ಬಂದಿ ಮೂವರು ಉಗ್ರರನ್ನು ಸುತ್ತುವರೆದು ಎನ್​ಕೌಂಟರ್​ ನಡೆಸಿದ್ದರು. ಈ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ನಮ್ಮ ಯೋಧರು ಎನ್​ಕೌಂಟರ್​ ಮಾಡಿದ್ದಾರೆ. ತ್ರಾಲ್​ನ ಮನೆಯೊಂದರಲ್ಲಿ ಇಬ್ಬರು ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ದೊರಕಿತ್ತು. ಈ ಮಾಹಿತಿಯ ಆಧಾರದ ಮೇಲೆ ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿ ಸುತ್ತುವರೆದಿದ್ದು, ಎನ್​ಕೌಂಟರ್​ ನಡೆಸಲಾಗಿದೆ.

ಎನ್​ಕೌಂಟರ್​ ನಡೆದ ಹಿನ್ನೆಲೆಯಲ್ಲಿ ಪುಲ್ವಾಮಾದಲ್ಲಿ ಮೊಬೈಲ್​ ನೆಟ್​ವರ್ಕ್​ ಸ್ಥಗಿತಗೊಳಿಸಲಾಗಿದೆ. ಇದೇ ಪುಲ್ವಾಮಾದಲ್ಲಿ ಕಳೆದ ತಿಂಗಳು 14ರಂದು ಉಗ್ರರು ಆತ್ಮಾಹುತಿ ಬಾಂಬ್​ ದಾಳಿ ನಡೆಸಿ 40 ಸಿಆರ್​ಪಿಎಫ್​ ಯೋಧರನ್ನು ಬಲಿಪಡೆದಿದ್ದರು. ಪಾಕಿಸ್ತಾನ ಮೂಲದ ಜೈಷ್​-ಇ-ಮೊಹಮದ್​ ಸಂಘಟನೆ ಈ ದಾಳಿಯನ್ನು ನಡೆಸಿತ್ತು. ಇದಕ್ಕೆ ಪ್ರತೀಕಾರಾವಗಿ ಭಾರತೀಯ ಯುದ್ಧ ವಿಮಾನಗಳು ಪಾಕಿಸ್ತಾನದ ಬಾಲಕೋಟ್​ನಲ್ಲಿರುವ ಜೈಷ್​ ಸಂಘಟನೆಯ ಅತಿದೊಡ್ಡ ತರಬೇತಿ ಶಿಬಿರವನ್ನು ಧ್ವಂಸಗೊಳಿಸಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ