ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ-ಘಟನೆಯಲ್ಲಿ ಬಾಲಕಿಯ ಸಾವು

ಬೆಂಗಳೂರು, ಮಾ.7- ಶಾಲೆಯಿಂದ ಇಬ್ಬರು ಮಕ್ಕಳನ್ನು ಸ್ಕೂಟರ್‍ನಲ್ಲಿ ತಾಯಿ ಕರೆದುಯೊತ್ತಿದ್ದಾಗ ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಮಗಳು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಮಲಾನಗರದ ನಿವಾಸಿ ತೇಜಸ್ವಿನಿ(11) ಮೃತಪಟ್ಟ ಬಾಲಕಿಯಾಗಿದ್ದು, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ನಿನ್ನೆ ಸಂಜೆ 4.30ರ ಸಮಯದಲ್ಲಿ ಇಬ್ಬರು ಮಕ್ಕಳನ್ನು ಶಾಲೆಯಿಂದ ಸ್ಕೂಟರ್‍ನಲ್ಲಿ ತಾಯಿ ಕರೆದೊಯ್ಯುತ್ತಿದ್ದಾಗ ಸೋಪ್ ಪ್ಯಾಕ್ಟರಿ ಬಳಿ ಅತಿವೇಗವಾಗಿ ಮುನ್ನುಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಹಿಂಬದಿ ಕುಳಿತಿದ್ದ ತೇಜಸ್ವಿನಿ ಕೆಳಗೆ ಬಿದ್ದಿದ್ದು, ತಕ್ಷಣ ಕ್ಯಾಂಟರ್ ಚಕ್ರ ಬಾಲಕಿ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾಳೆ. ತಾಯಿ ಹಾಗೂ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಲ್ಲೇಶ್ವರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ