ವಿಶ್ವಕಪ್‍ನಲ್ಲಿ ಹಾರ್ದಿಕ್, ಶಂಕರ್ ತಂಡದ ಭಾಗವಾಗಲಿ

ಮುಂಬರುವ ವಿಶ್ವಕಪ್‍ನಲ್ಲಿ ಆಲ್‍ರೌಂಡರ್‍ಗಳಾದ ಹಾರ್ದಿಕ್ ಪಾಂಡ್ಯ ಮತ್ತು ವಿಜಯ್ ಶಂಕರ್ ತಂಡದ ಭಾಗವಾಗಲಿ ಎಂದು ಮಾಜಿ ವೇಗಿ ಆಶೀಶ್ ನೆಹ್ರಾ ಹೇಳಿದ್ದಾರೆ.

ಆಂಗ್ಲರ ನಾಡಲ್ಲಿ ನಡೆಯಲಿರುವ ವಿಶ್ವಕಪ್‍ಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು ಮಹಾ ಸಮರಕ್ಕೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಟೀಂ ಇಂಡಿಯಾವನ್ನ ಕಳುಹಿಸಬೇಕಾಗಿದೆ.

ಯುವ ಆಲ್‍ರೌಂಡರ್ ವಿಜಯ್ ಶಂಕರ್ ಸದ್ಯ ಟೀಂ ಇಂಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ಇತ್ತ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ.

ವಿಜಯ್ ಶಂರ್ ಕಿವೀಸ್ ಮತ್ತು ಈಗ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚುತ್ತಿದ್ದಾರೆ.

ವಿಜಯ್ ಶಂಕರ್ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಆಶೀಶ್ ನೆಹ್ರಾ ಮಾತನಾಡಿದ್ದಾರೆ. ಮುಂಬರುವ ವಿಶ್ವಪ್‍ನಲ್ಲಿ ವಿಜಯ್ ಮತ್ತು ಹಾರ್ದಿಕ್ ತಂಡದ ಪ್ಲೇಯಿಂಗ್ ಇಲೆವೆನ್‍ನಲ್ಲಿ ಇರಲಿ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ