ಭಾರತೀಯ ಸೇನೆ ರಕ್ಷಣಾ ನಿಧಿಗೆ ಮೈಸೂರಿನ ವೈದ್ಯರಿಂದ ದೇಣಿಗೆ

ಮೈಸೂರು,ಮಾ.7- ಭಾರತೀಯ ಸೇನೆ ರಕ್ಷಣಾ ನಿಧಿಗೆ ಮೈಸೂರಿನ ವೈದ್ಯರಿಂದ ಒಂದು ಕೋಟಿ ರೂ. ದೇಣಿಗೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಸ್ತಾಂತರಿಸಲಾಯಿತು.

ಆದಿತ್ಯ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥ ಡಾ.ಚಂದ್ರಶೇಖರ್ ಅವರು ನಿನ್ನೆ ಖಾಸಗಿ ಹೋಟೆಲ್‍ನಲ್ಲಿ ನಡೆದ ಪ್ರಬುದ್ಧರ ಗೋಷ್ಠಿ ಕಾರ್ಯಕ್ರಮದಲ್ಲಿ ಸಚಿವರಿಗೆ ಈ ಚೆಕ್ ಹಸ್ತಾಂತರಿಸಿದರು.

ನಗರದ ಗೋಕುಲಂ ಬಡಾವಣೆಯಲ್ಲಿರುವ ಆದಿತ್ಯ ಅಧಿಕಾರಿ ಆಸ್ಪತ್ರೆ ವತಿಯಿಂದ ಒಂದು ಕೋಟಿ ರೂ.ಗಳ ಚೆಕ್‍ನ್ನು ನೀಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ