ಹಿರಿಯ ಪತ್ರಕರ್ತ ನಂದಕುಮಾರ್ ನಿಧನ

ಬೆಂಗಳೂರು, ಮಾ.10- ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ನಂದಕುಮಾರ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಮೃತರು ಪತ್ನಿ , ಸಂಬಂಧಿಕರು ಹಾಗೂ ಅಪಾರ ಸಂಖ್ಯೆ ಬಂಧುಬಳಗದವರನ್ನು ಅಗಲಿದ್ದಾರೆ. ಅವರಿಗೆ 45 ವರ್ಷ    ವಯಸ್ಸಾಗಿತ್ತು.
ಉದಯ, ಸಮಯ ಸೇರಿದಂತೆ ಹಲವು ಸುದ್ದಿವಾಹಿನಿಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ನಂದಕುಮಾರ್ ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರಿಗೆ ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಂದಕುಮಾರ್ ಅವರನ್ನು ಉಳಿಸಿಕೊಳ್ಳಲು ವೈದ್ಯರು ಸೇರಿದಂತೆ ಪತ್ರಕರ್ತರ ಒಂದು ತಂಡ ನಿರಂತರವಾಗಿ ಪ್ರಯತ್ನ ಮುಂದುವರೆಸಿತ್ತು. ಆದರೆ ಇಂದು ಮುಂಜಾನೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ: ನಂದಕುಮಾರ್ ನಿಧನಕ್ಕೆ ಬೆಂಗಳೂರು ಪ್ರೆಸ್‍ಕ್ಲಬ್, ಬೆಂಗಳೂರು ವರದಿಗಾರರ ಕೂಟ, ಪತ್ರಕರ್ತರ ಸಹಕಾರ ಸಂಘ, ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ   ಮಂಡ್ಯದ       ಸ್ವಗ್ರಾಮದಲ್ಲಿ  ನೆರವೇರಲಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ