ಬೈಕ್‍ಗೆ ಟ್ಯಾಂಕರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಬೆಂಗಳೂರು, ಮಾ.11-ವಾಟರ್ ಟ್ಯಾಂಕರ್ ವಾಹನವೊಂದು ಅತಿವೇಗವಾಗಿ ಬಂದು ಬೈಕ್‍ಗೆ ಡಿಕ್ಕಿಹೊಡೆದ ಪರಿಣಾಮ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ವೈಟ್‍ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂವರು ನಿವಾಸಿಯಾದ ರವಿ ಮೃತಪಟ್ಟ ಬೈಕ್ ಸವಾರ.

ರಾಯಚೂರು ಮೂಲದ ರವಿ ವೃತ್ತಿಯಲ್ಲಿ ಲಾರಿ ಕ್ಲೀನರ್ ಆಗಿದ್ದು, ವರ್ತೂರಿನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 11.15ರ ಸುಮಾರಿನಲ್ಲಿ ಗುಂಜೂರು ರಸ್ತೆ ಮೂಲಕ ರವಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ವಾಟರ್ ಟ್ಯಾಂಕರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ವೈಟ್‍ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ