ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ-ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರು, ಮಾ.11- ನಮ್ಮ ಸಂಸದರು ಬೆಂಗಳೂರಿಗೆ ನೀಡಿರುವ ಕೊಡುಗೆಗಳನ್ನು ಜನ ಮರೆಯುವುದಿಲ್ಲ. ಯಾರು ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ.

ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಧುರೀಣ ಎಸ್.ಎಂ.ಕೃಷ್ಣ ಇಂದಿಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶ ಸಾಕಷ್ಟು ಬದಲಾವಣೆ ಕಂಡಿದೆ. ಹಲವಾರು ಕ್ಷೇತ್ರಗಳಲ್ಲಿ ಸಾಧಿಸಲಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪ್ರಜ್ಞಾವಂತ ಮತದಾರರು ಬೆಂಬಲಿಸುವ ವಿಶ್ವಾಸವಿದೆ. ಮತ್ತೆ ಮೋದಿ ಪ್ರಧಾನಿಯಾಗುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

ಮಾಜಿ ಡಿಸಿಎಂ ಹಾಗೂ ಹಾಗೂ ಶಾಸಕ ಆರ್.ಅಶೋಕ್ ಅವರು ಇಂದು ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಹೊತ್ತು ಚರ್ಚೆ ನಡೆಸಿದರು.

ಇದಾದ ನಂತರ ಮಾಧ್ಯಮದವರೊಂದಿಗೆ ಎಸ್.ಎಂ.ಕೃಷ್ಣ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿಗೆ ಕೊಡುಗೆ ಏನು ನೀಡಿದ್ದೇನೆ ಎಂದು ಯಾರು ಮರೆಯುವುದಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ನಾನು ಪ್ರಚಾರ ನಡೆಸುತ್ತೇನೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ