ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಮೂರು-ನಾಲ್ಕು ದಿನಗಳಲ್ಲಿ ನಿರ್ಧಾರ: ಸುಮಲತಾ ಅಂಬರೀಶ್

ಮಂಡ್ಯ,ಮಾ.11- ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸುವಂತೆ ತಮ್ಮ ಸ್ಪಷ್ಟ ನಿರ್ಧಾರವನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ.

ನಾಗಮಂಗಲದ ಬೆಳ್ಳೂರು ಕ್ರಾಸ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಮಲತಾ, ಮಾ.18ರೊಳಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

ಈ ವಿಚಾರದಲ್ಲಿ ತಮ್ಮ ಮೇಲೆ ಯಾರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಲು ಸಾಧ್ಯವಿಲ್ಲ ಡಿ.ಕೆ.ಶಿವಕುಮಾರ್ ಅವರು ತಮ್ಮೊಂದಿಗೆ ಮಾತನಾಡಿದ್ದಾರೆ. ಆದರೆ ಮೈತ್ರಿ ಇರುವುದರಿಂದ ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧಿಸುವ ಸಲಹೆ ಮಾಡಿದ್ದಾರೆ ಎಂದರು.

ನಾನು ಏನು ಪ್ಲಾನ್ ಮಾಡಿಕೊಂಡಿದ್ದೆನೆಯೋ ಅದರಂತೆ ನಡೆದುಕೊಳ್ಳುತ್ತೇನೆ. ನನ್ನ ಜೊತೆ ಬರುವುದಾಗಿ ಹಲವರು ಹೇಳಿದ್ದಾರೆ. ನನ್ನ ಪರ ಪ್ರಚಾರವನ್ನು ಮಾಡುವ ಭರವಸೆ ನೀಡಿದ್ದಾರೆ. ದರ್ಶನ್ ಸಹ ಬೆಂಬಲಿಸಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ