ಲೋಕಸಭಾ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಭದ್ರತಾಪಡೆಗಳ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆಸಲು ಬಿಜೆಪಿ ಮನವಿ

ಕೊಲ್ಕತಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಅಲ್ಲಿನ ಪೊಲೀಸರು ಸಹಕರಿಸುತ್ತಾರೆ ಎಂಬ ನಂಬಿಕೆಯಿಲ್ಲ. ಆದ್ದರಿಂದ, ಚುನಾವಣೆಯನ್ನು ಕೇಂದ್ರ ಭದ್ರತಾಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗ ಚುನಾವಣೆ ಆಯೋಗದ ಅಧಿಕಾರಿಗಳ ಭೇಟಿಗೆ ಮುಂದಾಗಿದೆ. ಈಗಾಗಲೇ ಬಿಜೆಪಿ, ತೃಣಮೂಲ ಕಾಂಗ್ರೆಸ್​ ನಾಯಕರು ಮತದಾರರಿಗೆ ಬೆದರಿಕೆಯೊಡ್ಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯೇ ಉಳಿದಿಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭಾ ಚುನಾವನೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕೋಲ್ಕತದ ಮೇಯರ್​ ಆಗಿರುವ ಟಿಎಂಸಿ ಸಚಿವರೊಬ್ಬರು ಮಾತನಾಡಿ ಕೇಂದ್ರ ಸಶಸ್ತ್ರ ಪೊಲೀಸ್​ ಪಡೆ ಚುನಾವಣೆ ವೇಳೆ ಎರಡು ದಿನಗಳು ಮಾತ್ರ ಇರುತ್ತದೆ. ಉಳಿದ ದಿನಗಳಲ್ಲಿ ಜನರು ಪೊಲೀಸರನ್ನೇ ಅವಲಂಬಿಸಬೇಕಾಗಿದೆ ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿ ಮುಖ್ಯ ಚುನಾವಣಾ ಅಧಿಕಾರಿ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಜಯಪ್ರಕಾಶ್ ಮಜುಂದಾರ್​, ಟಿಎಂಸಿ ಅವರು ಜನರನ್ನು ಬೆದರಿಸುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ