ಉದ್ಯೋಗ ಸಿಗದ ಕಾರಣ-ಆತ್ಮಹತ್ಯೆಗೆ ಶರಣಾದ ಗೃಹಿಣಿ

ಮೈಸೂರು,ಮಾ.13- ಉದ್ಯೋಗ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಗೃಹಿಣೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನಗರ 4ನೇ ಹಂತದ ನಿವಾಸಿ ಹೇಮಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.

ಕಿರಿಯ ವಿಜ್ಞಾನಿ ಉಮೇಶ್ ಅವರನ್ನು ವಿವಾಹವಾಗಿದ್ದು, ಎಂ.ಕಾಂ ಪದವೀಧರೆ ಆಗಿದ್ದರು. ಇವರು ಕೆಲಸವನ್ನು ಹುಡುಕುತ್ತಿದ್ದರು. ಆದರೆ ಕೆಲಸ ಸಿಗದೆ ಮನನೊಂದಿದ್ದ ಈಕೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಮನೆಯವರಿಗೆ ಹೇಮಶ್ರೀ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ