ಮೂರು ದಿನಗಳಲ್ಲಿ ಸೀಟು ಹಂಚಿಕೆ ಪೂರ್ಣ

ಹಾಸನ, ಮಾ.13- ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಹಾಸನದ ಮೂಡಲಹಿಪ್ಪೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಕೇರಳ, ತಮಿಳುನಾಡು, ಒರಿಸ್ಸಾದಲ್ಲಿ ಚುನಾವಣಾ ಪ್ರಚಾರದಲ್ಲಿದ್ದು, ಮುಂದಿನ ಮೂರು ದಿನಗಳಲ್ಲಿ ರಾಹುಲ್ ಗಾಂಧಿ ಜೊತೆ ಮತ್ತೊಮ್ಮೆ ಸಭೆ ಸೇರಿ ಸೀಟು ಹಂಚಿಕೆ ಪೂರ್ಣಗೊಳಿಸುವುದಾಗಿ ಹೇಳಿದರು.

ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಹಂಚಿಕೆ ಮಾಡಿರುವುದರಿಂದ ತಮ್ಮ ಮೊಮ್ಮಗನಿಗೆ ಶುಭ ಹಾರೈಸಲು ಬಂದಿರುವುದಾಗಿ ಗೌಡರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ