ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ-ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಾ.14- ಬೆಳಗಾವಿ ಎರಡು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಪರವಾಗಿ ದಿಲ್ಲಿಯಲ್ಲಿ ಟಿಕೆಟ್ ಕೊಡಿಸಲು ಲಾಭಿ ನಡೆಸಿದ್ದಾರೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇವತ್ತಿನ ಸಭೆಯಲ್ಲಿ ಅಭಿಪ್ರಾಯ ಹೇಳಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಟಿಕೆಟ್ ಹಂಚಿಕೆಯಲ್ಲಿ ಅಲ್ಪ ಸ್ವಲ್ಪ ಭಿನ್ನಾಭಿಪ್ರಾಯಾಗಳು ಇರುತ್ವೆ. ಕಾಂಗ್ರೆಸ್ ಹೈಕಮಾಂಡ್ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಿದೆ, ಸಹೋದನಿಗೆ ಟಿಕೆಟ್ ಕೊಡಿಸಬಾರದಂತ ಅಂತಿಲ್ಲಾ. ಗೆಲ್ಲೋ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ ಎಂದರು.

ಲಾಬಿ ಮಾಡೋದು ಕಾಂಗ್ರೆಸ್‍ನಲ್ಲಿ ಹೊಸದೆನಲ್ಲ, ಯಾರೆ ನಿಂತರೂ ಜಿಲ್ಲಾ ನಾಯಕರು ಸೇರಿ ಸಪೋರ್ಟ್ ಮಾಡುತ್ತೆವೆ. ಚನ್ನರಾಜ ಹಟ್ಟಿಹೊಳಿ ಅವರ ಹೆಸರು ಇದೆ, ಎರಡು ಮೂರು ದಿನದಲ್ಲಿ ಎರಡು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಹಿರಂಗವಾಗಲಿದೆ.

ಸಭೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡಾ ಭಾಗಿಯಾಗಲಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ