ನಿರೀಕ್ಷಿತ ಮಟ್ಟದಲ್ಲಿ ಕಲಬುರಗಿ ಅಭಿವೃದ್ಧಿಯಾಗಿಲ್ಲ-ಶಾಸಕ ಡಾ.ಉಮೇಶ್ ಜಾಧವ್

ಕಲಬುರಗಿ, ಮಾ.14- ದೇಶದ ದೊಡ್ಡಮಟ್ಟದ ನಾಯಕ ಕಲಬುರಗಿಯಲ್ಲಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಚಿಂಚೊಳ್ಳಿ ಶಾಸಕ ಡಾ. ಉಮೇಶ್ ಜಾಧವ್ ವಾಗ್ದಾಳಿ ನಡೆಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಸಲ ತಾವು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು ಜನರು ತಮ್ಮನ್ನು ಬೆಂಬಲಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಬಿಜೆಪಿಗೆ ಮಾರಾಟವಾಗುತ್ತಿದ್ದೇನೆ ಎಂದು ಸಚಿವ ಪ್ರಿಯಾಂಕ ಖರ್ಗೆ ಪದೆ ಪದೆ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಇದೇ ರೀತಿ ಮುಂದುವರೆದಿದ್ದೇ ಆದರೆ ಕಾನೂನು ಮೊರೆ ಹೋಗ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರೀಯಾಂಕಾ ಅವರಿಗೆ ತಾಕತ್ತಿದ್ದರೆ ಚಿತ್ತಾಪುರ ಕ್ಷೇತ್ರ ಬಿಟ್ಟು ಚಿಂಚೊಳ್ಳಿಯಿಂದ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು. ಎರಡು ಸಲ ಆಯ್ಕೆಯಾದ ನನ್ನನ್ನು ಮಂತ್ರಿ ಮಾಡದೇ ಅನ್ಯಾಯ ಮಾಡಲಾಗಿದೆ ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಲಾಗಿದೆ ಇದಕ್ಕೆ ಖರ್ಗೆ ಅವರೇ ಕಾರಣ ಎಂದು ಆರೋಪಿಸಿದ ಜಾಧವ್ ಅವರು ಇದರಿಂದ ಮನನೊಂದು ತಾವು ಕೈ ಪಕ್ಷದಿಂದ ಹೊರಬರಬೇಕಾಯಿತು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ