ಎಂಜನಿಯರಿಂಗ್ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಮೂವರು

ಬೆಂಗಳೂರು, ಮಾ.15-ಬೇಕರಿಯೊಂದರ ಬಳಿ ಸ್ನೇಹಿತರೊಂದಿಗೆ ಎಂಜಿನಿಯರಿಂಗ್ ವಿದ್ಯಾರ್ಥಿ ನಿಂತಿದ್ದಾಗ ಬೈಕ್‍ನಲ್ಲಿ ಬಂದ ಮೂವರು ಈತನೊಂದಿಗೆ ಜಗಳವಾಡಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಲ್ಲೆಯಿಂದಾಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಹರಿಕೃಷ್ಣ ಯಾದವ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 8.45ರ ಸಮಯದಲ್ಲಿ ಹರಿಕೃಷ್ಣ ಯಾದವ್ ಸ್ನೇಹಿತರ ಜೊತೆ ರೇವಾ ಕಾಲೇಜು ಸಮೀಪದ ಬೇಕರಿ ಬಳಿ ಸ್ನೇಹಿತರೊಂದಿಗೆ ಮಾತನಾಡುತ್ತಾ ನಿಂತಿದ್ದರು.

ಈ ಸಂದರ್ಭದಲ್ಲಿ ಬೈಕ್‍ನಲ್ಲಿ ಬಂದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಹರಿಕೃಷ್ಣ ಯಾದವ್ ಅವರೊಂದಿಗೆ ಜಗಳವಾಡಿ ಕೈ, ಕೈ ಮಿಲಾಯಿಸಿ ರಿಪೀಸ್ ಪಟ್ಟಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಳೇ ವೈಷಮ್ಯದಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿರುವ ಶಂಕೆಯನ್ನು ಪೆÇಲೀಸರು ವ್ಯಕ್ತಪಡಿಸಿದ್ದಾರೆ.
ಹಲ್ಲೆಯಿಂದ ಗಾಯಗೊಂಡಿರುವ ಹರಿಕೃಷ್ಣ ಯಾದವ್‍ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಯಲಹಂಕ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ