ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದ ಕಾರು-ಘಟನೆಯಲ್ಲಿ ಬೈಕ್ ಸವಾರನ ಸಾವು

ಶ್ರೀರಂಗಪಟ್ಟಣ, ಮಾ.15- ಚಾಲಕನ ನಿಯಂತ್ರಣ ತಪ್ಪಿ ಕಾರು ಬೈಕ್‍ಗೆ ಅಪ್ಪಳಿಸಿ ನಂತರ ಬಸ್‍ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ವಿದ್ಯಾರ್ಥಿನಿಗೆ ಕಾಲು ಮುರಿದಿರುವ ಘಟನೆ ಇಂದು ಬೆಳಗ್ಗೆ ಶ್ರೀರಂಗಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಗದಗ ಮೂಲದ ಸಂತೋಷ್(22) ಮೃತಪಟ್ಟ ಬೈಕ್ ಸವಾರ.

ಇಂದು ಬೆಳಗ್ಗೆ ಸಂತೋಷ್ ಮಂಡ್ಯದಿಂದ ಮೈಸೂರು ಕಡೆಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಇದೇ ಮಾರ್ಗವಾಗಿ ಹಿಂದಿನಿಂದ ಬಂದ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದೆ.

ನಂತರ ಕೋಡಿಶೆಟ್ಟಿಪುರ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗಲು ಬಸ್‍ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೌನಶ್ರೀ (20)ಗೆ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಮೌನಶ್ರೀ ಕಾಲು ಮುರಿದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಶ್ರೀರಂಗಪಟ್ಟಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ