ಮರಕ್ಕೆ ನೇಣು ಹಾಕಿಕೊಂಡು ಯುವಕನ ಆತ್ಮಹತ್ಯೆ

ತುಮಕೂರು, ಮಾ.16-ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮರವೊಂದಕ್ಕೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.

ಆಸ್ಪತ್ರೆಗೆ ಮುಖ್ಯ ಗೇಟ್ ಮುಂಭಾಗವಿರುವ ಮರವೊಂದಕ್ಕೆ ಯುವಕ ನೇಣು ಬಿಗಿದುಕೊಂಡಿದ್ದು, ಹೆಸರು ಮತ್ತು ವಿಳಾಸ ತಿಳಿದುಬಂದಿಲ್ಲ.
ರಾತ್ರಿ ಯುವಕ ಅಲ್ಲಿಯೇ ಓಡಾಡಿಕೊಂಡಿದ್ದ ಎನ್ನಲಾಗಿದ್ದು, ಮಧ್ಯರಾತ್ರಿ 12 ರ ಸಮಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ವಿಷಯ ತಿಳಿದ ಕೂಡಲೇ ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ನಗರ ಠಾಣೆ ಪೆÇಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಸರ್ಕಲ್ ಇನ್ಸ್‍ಪೆಕ್ಟರ್ ಶುಭ ಅಂಬಿಕಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ದಿನದ 24 ಗಂಟೆಯೂ ರೋಗಿಗಳು, ವೈದ್ಯರು ಓಡಾಡುವ ಈ ಆಸ್ಪತ್ರೆಯ ಆವರಣದಲ್ಲೇ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ