ಧಾರವಾಡದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರ ಸಾವು

ಧಾರವಾಡ: ನಿರ್ಮಾಣ ಹಂತದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದು ಅನೇಕರು ಕಟ್ಟದಡಿಯಲ್ಲಿ ಸಿಲುಕಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಳಗಾವಿ ರಸ್ತೆಯಲ್ಲಿ ಹೊಸ ಬಸ್ ನಿಲ್ದಾಣದ ಸಮೀಪ ಕುಮಾರೇಶ್ವರ ನಗರ ಕ್ರಾಸ್‍ಬಳಿ ಈ ದುರ್ಘಟನೆ ನಡೆದಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೆಲ ಅಂಗಡಿಗಳನ್ನು ಈಗಾಗಲೇ ಬಾಡಿಗೆ ಕೊಡಲಾಗಿತ್ತು ಎನ್ನಲಾಗಿದೆ.

ಈ ಕಟ್ಟಡದ ಮೇಲಿನ ಮಹಡಿಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ಆರಂಭಿಸಿದೆ.

ಕಟ್ಟಡದಲ್ಲಿ ಅಂಗಡಿಗಳು ಇದ್ದಿದ್ದರಿಂದ ನೂರಕ್ಕೂ ಹೆಚ್ಚು ಜನರ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.

20ಕ್ಕೂ ಹೆಚ್ಚು ಅಂಬುಲೆನ್ಸ್‍ಗಳು ಸ್ಥಳಕ್ಕೆ ಆಗಮಿಸಿವೆ. ನೂರಾರು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಕಟ್ಟಡ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರ ಮಾವನಿಗೆ ಸೇರಿದ್ದಾಗಿದೆ ಎಂದು ಆರೋಪಿಸಿರುವ ಬಿಜೆಪಿ, ಕಟ್ಟಡದ ಖರೀದಿಪತ್ರವೊಂದನ್ನು ಬಿಡುಗಡೆಗೊಳಿಸಿದೆ.

dwd-XXX_1 sale deed-dwd

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ