ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ನೆಲಮಂಗಲ, ಮಾ.19-ಈಜಲು ತೆರಳಿದ್ದ ಯುವಕರು ಜಲಸಮಾಧಿಯಾಗಿರುವ ಘಟನೆ ಮಲ್ಲಸಂದ್ರದ ಕಲ್ಲುಕ್ವಾರಿಯಲ್ಲಿ ನಡೆದಿದೆ.

ಬೆಂಗಳೂರಿನ ಹೆಗ್ಗನಹಳ್ಳಿ ಮೂಲದ ಅರ್ಬೇಜ್‍ಖಾನ್ (19), ತಬರೇಜ್‍ಪಾಷ (22) ಮೃತಪಟ್ಟ ಯುವಕರು.

ಸ್ಕೂಟರ್ ಗ್ಯಾರೇಜ್‍ನಲ್ಲಿ ಕೆಲಸ ಮಾಡುತ್ತಿದ್ದ ಇವರು ಐದು ಮಂದಿ ಸ್ನೇಹಿತರೊಂದಿಗೆ ಈಜಲು ನಿನ್ನೆ ಮಲ್ಲಸಂದ್ರದ ಕಲ್ಲುಕ್ವಾರಿಗೆ ತೆರಳಿದ್ದರು.

ಈಜಾಡುತ್ತಿದ್ದ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಇಂದು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಮಾದನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ