ರಾಜ್ಯದ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಕಮ್ಯೂನಿಸ್ಟ್ ಪಕ್ಷ

ಬೆಂಗಳೂರು, ಮಾ.20-ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಏಳು ಕ್ಷೇತ್ರಗಳಿಂದ ಸೋಷಲಿಸ್ಟ್ ಯುನಿಟ್ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ ಮಾತನಾಡಿ, ನಮ್ಮ ರಾಜ್ಯದಲ್ಲಿ ಎಸ್‍ಯುಸಿಐ ಸದಾ ಜನರ ಧ್ವನಿಯಾಗಿ ಹಲವಾರು ಹೋರಾಟಗಳನ್ನು ಸಂಘಟಿಸುತ್ತಾ ಬಂದಿದೆ.

ರಸ್ತೆ ಅಗಲೀಕರಣ,ಕುಡಿಯುವ ನೀರು, ಆಶಾ ಅಂಗನವಾಡಿ, ಹಾಸ್ಟೆಲ, ಕಾರ್ಮಿಕರ ಪರವಾಗಿ ದೌರ್ಜನ್ಯಗಳ ವಿರುದ್ಧ ನಮ್ಮ ಪಕ್ಷವು ಹೋರಾಟಗಳನ್ನು ಮಾಡುತ್ತಾ ಬಂದಿದೆ. ಜನರ ಸೇವೆ ಮಾಡುವುದೇ ನಮ್ಮ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಲಬುರಗಿ, ರಾಯಚೂರು, ಬಳ್ಳಾರಿ, ಧಾರವಾಡ, ದಾವಣಗೆರೆ, ಮೈಸೂರು, ಬೆಂಗಳೂರು ಗ್ರಾಮಾಂತರ ದಿಂದ ಸ್ಪರ್ಧಿಸುತಿದ್ದು ನಮ್ಮ ಪಕ್ಷವನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ