ತುಮಕೂರಿನಿಂದಲೇ ಹೆಚ್ ಡಿ ದೇವೇಗೌಡ ಸ್ಪರ್ಧೆ: ಸಚಿವ ಶ್ರೀನಿವಾಸ್

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಸಚಿವ ಶ್ರೀನಿವಾಸ್​ ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು, ಪಕ್ಷದ ಹಿತದೃಷ್ಟಿಯಿಂದ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಾರ್ಚ್​ 25 ರಂದು ಗೌಡರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮಾ. 24ಕ್ಕೆ ತುಮಕೂರಿನಲ್ಲಿ ಜೆಡಿಎಸ್​ ನಾಯಕರ ಸಭೆ ನಡೆಯಲಿದೆ ಎಂದು ತಿಳಿಸಿದರು.

ಇತ್ತೀಚೆಗೆ ಜೆಡಿಎಸ್-ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದ ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ಕಾಂಗ್ರೆಸ್​ ನ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ ಸೇರಿದಂತೆ ತಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಇದೇ ಗಳಿಗೆಯಲ್ಲಿ ದೆಹಲಿಯಲ್ಲಿ ನನ್ನ ಅವಶ್ಯಕತೆ ಎಷ್ಟಿದೆ ಎಂದು ತಿಳಿದುಕೊಂಡು ಅಗತ್ಯ ಬಿದ್ದರೆ ತಮ್ಮ ನಿಲುವು ಸ್ಪಷ್ಟಪಡಿಸುವುದಾಗಿ ಹೇಳಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ