ರಾಜಕೀಯದಲ್ಲಿ ಗುರು ಶಿಷ್ಯ ಸಂಬಂಧ ಲೆಕ್ಕಕ್ಕೆ ಬರುವುದಿಲ-ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್

ಮೈಸೂರು, ಮಾ.23-ರಾಜಕೀಯದಲ್ಲಿ ಗುರು ಶಿಷ್ಯ ಸಂಬಂಧ ಲೆಕ್ಕಕ್ಕೆ ಬರಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಇಂದಿಲ್ಲಿ ತಿಳಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಧ್ರುವನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಗುರು-ಶಿಷ್ಯರ ಸಂಬಂಧವೇನಿದ್ದರೂ ರಾಮಾಯಣ-ಮಹಾಭಾರತದಲ್ಲಿ. ಇಲ್ಲಿ ಏನಿದ್ದರೂ ಅವರು ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳಷ್ಟೇ ಎಂದಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಎಲ್ಲವನ್ನೂ ಜನರೇ ನಿರ್ಧರಿಸುತ್ತಾರೆ. ಈಗ ಶಿಷ್ಯ ಎನ್ನುವ ಸಂಬಂಧಗಳೆಲ್ಲ ಉಳಿದಿಲ್ಲ ಎಂದರು.

ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ಶ್ರೀನಿವಾಸ್ ಪ್ರಸಾದ್ ನನ್ನ ಗುರುವಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ನಾನು ಮೊದಲ ಶಾಸಕನಾದಾಗ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್‍ನಲ್ಲಿರಲಿಲ್ಲ, ಜೆಡಿಎಸ್‍ನಲ್ಲಿದ್ದರು. ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಶ್ರೀನಿವಾಸ್‍ಪ್ರಸಾದ್ ಅಲ್ಲ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ