ವೇಶ್ಯವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ-ನಾಲ್ವರ ಬಂಧನ

ಮೈಸೂರು, ಮಾ.23- ನಗರದ ಸಿಸಿಬಿ ಪೊಲೀಸರು ವೇಶ್ಯವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಹಾಲಿನಹಳ್ಳಿ ವಾಸಿ ನಿತಿನ್(20) ವೆರುಷಿಯುವ್ ಕಾಲೇಜು ಸಮೀಪ ವಾಸಿ ಪವನ್(31), ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ತುಮಕೂರಿನ ರವಿಗಂಗಯ್ಯ(26) ಹಾಗೂ ಬೆಂಗಳೂರಿನ ಶ್ರೀನಿವಾಸ್ ಬಂಧಿತರು.

ದಾಳಿ ಸಂದರ್ಭದಲ್ಲಿ ಪೊಲೀಸರು ಆಂಧ್ರ ಹಾಗೂ ಪಶ್ಚಿಮ ಬಂಗಾಳದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ನಗರದ ಎಚ್‍ಬಿಪಿಸಿ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ.

ಸಿಸಿಬಿ ಎಸಿಪಿ ಮರಿಯಪ್ಪ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಇನ್ಸ್‍ಪೆಕ್ಟರ್ ಕೃಷ್ಣಪ್ಪ ಎಎಸ್‍ಐ ಸುಭಾಷ್ ರಾಜು ಹಾಗೂ ನಾಗುಬಾಯ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಈ ಪ್ರಕರಣದ ಬಗ್ಗೆ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯನ್ನು ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ