ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ-ಕೇಂದ್ರ ಸಚಿವ ಹರ್ಷವರ್ಧನ

ಬೆಳಗಾವಿ, ಮಾ.24- ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗ್ತಾರೆ. 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಪ್ರಪಂಚದಲ್ಲಿ 20 ದೇಶಗಳಲ್ಲಿ ಚುನಾವಣೆ ನಡೆಯುತ್ತಿದೆ. ಆದರೆ ಇಡೀ ಪ್ರಪಂಚವೇ ಭಾರತದ ಚುನಾವಣೆಯತ್ತ ಮುಖ ಮಾಡಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದರು.

ಕಾಂಗ್ರೆಸ್ಸಿನ ರಾಹುಲ್ ಗಾಂಧಿ, ರಫೇಲ್, ಡೈರಿ ವಿಚಾರಗಳು ಅಪ್ರಸ್ತುತ. ಇಂತಹ ಸಂದರ್ಭದಲ್ಲಿ ಆ ವಿಚಾರಗಳ ಬಗ್ಗೆ ಮಾತನಾಡಿ ಸಮಯ ಹಾಳು ಮಾಡುವುದಿಲ್ಲ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧೆ ವಿಚಾರ ಊಹಾಪೋಹ. ಇಂತಹವುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಪ್ರಧಾನಿ ಮೋದಿ ಸರ್ಕಾರವು ಐದು ವರ್ಷ ಒಳ್ಳೆಯ ಆಡಳಿತ ನೀಡಿದೆ. ದೇಶದ ಜನರಿಗೆ ಉತ್ತಮ ಯೋಜನೆಗಳನ್ನು ಕೊಟ್ಟಿದೆ ಎಂದರು.

ಸುರೇಶ್ ಅಂಗಡಿ ಗುಣಗಾನ ಮಾಡಿದ ಕೇಂದ್ರ ಸಚಿವ ಹರ್ಷವರ್ಧನ, ಸುರೇಶ ಅಂಗಡಿ ಪ್ರಾಮಾಣಿಕ ನಾಯಕ. ದೇಶಕ್ಕಾಗಿ, ಕರ್ನಾಟಕ ರಾಜ್ಯಕ್ಕಾಗಿ ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ