ಸಿಂಧ್ ಪ್ರಾಂತ್ಯದ ಇಬ್ಬರು ಸಹೋದರಿಯ ಅಪಹರಣ ಪ್ರಕರಣ; ವರದಿ ಕೇಳಿದ ಸುಷ್ಮಾ ಸ್ವರಾಜ್

ನವದೆಹಲಿ: ಹೋಳಿ ಹಬ್ಬದ ದಿನದಂದು ಸಿಂಧ್ ಪ್ರಾಂತ್ಯದಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪರಹಣ ಮಾಡಿ ಬಲವಂತವಾಗಿ ಮತಾಂತರ ಮಾಡಿರುವ ಕುರಿತಂತೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದಲ್ಲಿರುವ ಭಾರತ ರಾಯಭಾರಿ ಕಚೇರಿಯಿಂದ ವರದಿ ಕೇಳಿದ್ದಾರೆ.

ಪಾಕ್‍ನ ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಆಚರಣೆಯಲ್ಲಿ ತೊಡಗಿದ್ದ ಯುವತಿಯನ್ನು ಅಪಹರಣ ಮಾಡಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮೀಷನರ್ ಅವರನ್ನು ಕೇಳಿದ್ದಾರೆ.

ಸಿಂಧೂ ಪ್ರಾಂತ್ಯದ ಗೊಟ್ಕಿ ಜಿಲ್ಲೆಯ ಡಾರ್ಕಿ ಪಟ್ಟಣದಲ್ಲಿ ಹೋಳಿ ಹಬ್ಬದಂದು ಅಪಹರಣ ಪ್ರಕರಣ ನಡೆದಿದ್ದು, ಹಿಂದೂ ಸಮುದಾಯದವರು ಪ್ರತಿಭಟನೆ ನಡೆಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Sushma asks report on abduction of Hindu sisters in Sindh, Pakistan retorts

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ