ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ-ಕರ್ನಾಟಕದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲಲಿದೆ-ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು, ಮಾ.25- ನರೇಂದ್ರ ಮೋದಿ ಅವರು 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಮತ್ತೆ ಪ್ರಧಾನಿಯಾಗಲಿದ್ದಾರೆ.ಕರ್ನಾಟಕದಲ್ಲಿ ಬಿಜೆಪಿ 22ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಾಮಪತ್ರ ಸಲ್ಲಿಸುತ್ತಿದ್ದು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಹಾಗೂ ಶಾಸಕರ ಜತೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ರಾಜ್ಯದಲ್ಲಿ ಮೈತ್ರಿ ಸರಕಾರ ಕಚ್ಚಾಟದಲ್ಲಿ ತೊಡಗಿದೆ ಈ ಮೊದಲು ಮಂತ್ರಿ ಸ್ಥಾನಕ್ಕಾಗಿ ಕಚ್ಚಾಡುತ್ತಿದ್ದರು ಈಗ ಲೋಕಸಭಾ ಕ್ಷೇತ್ರದ ಸ್ಥಾನ ಹಂಚಿಕೆ ವಿಚಾರವಾಗಿ ಕಚ್ಚಾಡುತ್ತಿದ್ದಾರೆ. ರಾಜ್ಯದ ಬರದಿಂದ ತತ್ತರಿಸಿದ್ದರು. ಇತ್ತ ಗಮನಹರಿಸಿಲ್ಲ ಎಂದು ಟೀಕಿಸಿದರು.

ಮಂಡ್ಯದ ಗಂಡು ಮಗಳು ಸುಮಲತಾ:
ಪ್ರಸ್ತುತ ಆಡಳಿತ ನಡೆಸುತ್ತಿರುವ ಪಕ್ಷವನ್ನು ಎದುರಿಸುವ ಧೈರ್ಯವನ್ನು ಸುಮಲತಾ ತೋರಿದ್ದಾರೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಅಂಬರೀಷ್ ಮರಣದ ನಂತರ ಎಲ್ಲ ಪಕ್ಷಗಳು ಅವರಿಗೆ ಬೆಂಬಲ ಕೊಡಬೇಕಾಗಿತ್ತು. ಅಂಬರೀಷ್ ನಿಧನದ ಸಂದರ್ಭದಲ್ಲಿ ನೀವು ಕಾಳಜಿವಹಿಸಿ ಕೆಲಸ ಮಾಡಿದ್ದಿರಿ ಈಗ ಸುಮಲತಾ ವಿರುದ್ಧದ ನಾಮಪತ್ರ ವಾಪಸ್ ಪಡೆದು ಬೆಂಬಲ ಸೂಚಿಸಬೇಕು ಇದು ಅಂಬರೀಷ್ ಅವರಿಗೆ ಕೊಡುವ ಗೌರವ ಎಂದು ಅಭಿಪ್ರಾಯಪಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ