ಹೆಚ್.ಟಿ.ಸಾಂಗ್ಲಿಯಾನರವರಿಗೆ ಕಾಂಗ್ರೇಸ್ ಟಿಕೆಟ್ ನೀಡಬೇಕು-ಕ್ರಿಶ್ಚಿಯನ್ ವೆಲ್‍ಫೇರ್ ಆಸೋಸಿಯೇಶನ್

ಬೆಂಗಳೂರು, ಮಾ.25- ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದು ಮಾಜಿ ಸಂಸದ ಹೆಚ್.ಟಿ ಸಾಂಗ್ಲಿಯಾನ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕರ್ನಾಟಕ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಶನ್ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರಿಶ್ಚಿಯನ್ ಸಮುದಾಯ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು ಇದುವರೆಗೂ ಸಮುದಾಯಕ್ಕೆ ಟಿಕೆಟ್ ನೀಡದೇ ನಮ್ಮ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ ಎಂದು ದೂರಿದರು.

ಎಲ್ಲ ಸಮುದಾಯಕ್ಕೂ ರಾಜಕೀಯವಾಗಿ ಅವಕಾಶ ನೀಡುವಂತೆ ಕ್ರಿಶ್ಚಿಯನ್ ಸಮುದಾಯಕ್ಕೂ ರಾಜಕೀಯವಾಗಿ ಅವಕಾಶ ನೀಡುವಂತೆ ಮನವಿ ಮಾಡಿದರು.

ಮಾಜಿ ಸಂಸದ ಹೆಚ್.ಟಿ ಸಾಂಗ್ಲಿಯಾನ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲï ಗಾಂಧಿ ಆಶ್ವಾಸನೆ ನೀಡಿದ್ದರು.ಆದರೆ ಈ ಬಾರಿ ಟಿಕೆಟ್ ನೀಡಲು ಹಿಂದೇಟು ಹಾಕುತ್ತಿದ್ದಾರೆ.ರಾಜ್ಯದಲ್ಲಿ ಕ್ರಿಶ್ಚಿಯನï ಸಮುದಾಯದವರು 35 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಇವರ ಅಭಿವೃದ್ಧಿಗಾಗಿ ರಾಜಕೀಯ ಪ್ರತಿನಿಧಿಯಾಗಿ ಯಾರೂ ಇಲ್ಲ. ಆದ್ದರಿಂದ ಸಮುದಾಯದ ಅಭಿವೃದ್ಧಿಗಾಗಿ ಪ್ರತಿನಿಧಿಸಲು ನಾನು ಮುಂದಾಗಿದ್ದೇನೆ. ಆದರಿಂದ ನನಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ