ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನನಲ್ಲ-ಸಂಸದ ಮುದ್ದಹನುಮೇಗೌಡ

ತುಮಕೂರು,ಮಾ.25-ತುಮಕೂರು ಲೋಕಸಭಾ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನಾನು ನಿಂತರೇ ಇಲ್ಲಿ ನಿಲ್ಲುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರು ತಿಳಿಸಿದರು.

ಶೆಟ್ಟಿಹಳ್ಳಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ , ಕಾಂಗ್ರೆಸ್‍ಗೆ ಬಿಟ್ಟುಕೊಟ್ಟಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಇತರರು ನನಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ ನಾನು ಅಲ್ಲಿಗೆ ಹೋಗಿ ಸ್ಪರ್ಧಿಸುವಷ್ಟು ದೊಡ್ಡ ವ್ಯಕ್ತಿಯಲ್ಲ. ಇಲ್ಲಿಯೇ ಸ್ಪರ್ಧಿಸುತ್ತೇನೆ ಎಂದರು.

ಈಗಾಗಲೇ ನನ್ನನ್ನು ಹಲವರು ಸಂಪರ್ಕಿಸಿರುವುದು ನಿಜ. ಆದರೆ ನನ್ನ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರಕ್ಕೆ ಏಕೆ ಹೋಗಲಿ, ಅಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿರುವ ವ್ಯಕ್ತಿ ನಾನಲ್ಲ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ