ತಾಯಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ-ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ

ಮೈಸೂರು, ಮಾ.25- ಮೈಸೂರು ಹುಲಿಗಳಿಗೆ ಪ್ರಸಿದ್ಧ ಆದರೆ ತಾಯಿ ಚಾಮುಂಡೇಶ್ವರಿ ವಾಹನ ಸಿಂಹ ಹಾಗಾಗಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರತಾಪ್ ಸಿಂಹ ಇಂದಿಲ್ಲಿ ಹೇಳಿದರು.

ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಪ್ರತಾಪ್ ಸಿಂಹ ಅವರು ಇಂದು ಬೆಳಗ್ಗೆ ಕುಟಂಬದವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ಮುಖಂಡರು ಆಗಮಿಸಲಿದ್ದಾರೆ ಎಂದರು.

ನಂತರ ನಗರಕ್ಕೆ ಆಗಮಿಸಿದ ಪ್ರತಾಪ್ ಸಿಂಹ ಅವರು ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಗಣಪತಿ ಹಾಗೂ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಬಿಜೆಪಿ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮೈತ್ರಿ ಪಕ್ಷದ ಅಭ್ಯರ್ಥಿ ವಿಜಯಶಂಕರ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಒಂದೇ ಸ್ಥಳದಲ್ಲಿ ಪೂಜೆ ಸಲ್ಲಿಸಿ, ಒಂದೇ ಸ್ಥಳದಿಂದ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ