ಬಿಜೆಪಿಯ ದಲಿತ ವಿರೋಧಿ ನೀತಿ ಖಂಡಿಸಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ-ಮಾಜಿ ಸಚಿವ ಬಾಬುರಾವ್ ಚವ್ಹಾಣ್

ಬೆಂಗಳೂರು, ಮಾ.26- ಭಾರತೀಯ ಜನತಾ ಪಾರ್ಟಿಯ ದಲಿತ ವಿರೋಧಿ ಧೋರಣೆಯನ್ನು ಖಂಡಿಸಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮಾಜಿ ಸಚಿವ ಬಾಬುರಾವ್ ಚವ್ಹಾಣ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದ ಮಾತುಗಳನ್ನು ಕೇವಲ ಹೇಳಿಕೆಯ ಮಾತುಗಳಾಗಿವೆ.

ನಾನು ದಲಿತ ಎಂಬ ಕಾರಣಕ್ಕೆ ಬಿಜೆಪಿ ಪಕ್ಷದ ಉಪಾಧ್ಯಕ್ಷ ಹುದ್ದೆಯನ್ನು ನೀಡಿದ ದಿನದಿಂದಲೂ ಇಲ್ಲಿಯವರೆಗೂ ನನ್ನನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬ ಬಡ ಠೇವಣಿದಾರನ ಖಾತೆಗೆ 15ಲಕ್ಷ ರೂ.ಗಳನ್ನು ಹಾಕುವ ಸುಳ್ಳು ಭರವಸೆಯನ್ನು ನೀಡಿದ್ದಾರೆ. ಈ ಭರವಸೆ ಬಡವರನ್ನು ದಾರಿ ತಪ್ಪಿಸುವ ಕೆಲಸವಾಗಿದೆ ಎಂದರು.

ದಲಿತ ಸಮುದಾಯವನ್ನು ಯಾವೊಂದು ಕೆಲಸಕ್ಕೂ ವಿಶ್ವಾಸಕ್ಕೂ ತೆಗೆದುಕೊಳ್ಳದೆ ಹಣದ ಆಮೀಷಕ್ಕಾಗಿ ಸಮಾಜವನ್ನು ತುಳಿದಿದ್ದಾರೆ. ಆದರಿಂದ ಮನನೊಂದು ನಾನು ರಾಜ್ಯ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ