ಕ್ಷುಲ್ಲಕ ವಿಚಾರಕ್ಕೆ ಪತಿಯಿಂದ ಪತ್ನಿಯ ಕೊಲೆ

ಆನೇಕಲ್, ಮಾ.26- ಪತ್ನಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಪತಿ, ಆಕೆ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ತಮಿಳುನಾಡು, ವೆಲ್ಲೂರು ಜಿಲ್ಲೆ, ತಿರುಪತ್ತೂರು ತಾಲೂಕು ನಿವಾಸಿ ವಳ್ಳಿ (37) ಕೊಲೆಯಾದ ದುರ್ದೈವಿ.

ಕಟ್ಟಡ ನಿರ್ಮಾಣ ಕೆಲಸಕ್ಕೆಂದು ರಾಜ (46) ತನ್ನ ಪತ್ನಿ ವಳ್ಳಿ ಹಾಗೂ ಪುತ್ರನೊಂದಿಗೆ ಬೆಂಗಳೂರಿಗೆ ಬಂದು ಜಿಗಣಿ ಹೋಬಳಿಯ ಸೀತನಾಯಕನಹಳ್ಳಿ ಗ್ರಾಮದ ಬಳಿ ಕೆಎನ್‍ಎಸ್ ಲೇಔಟ್‍ನಲ್ಲಿರುವ ಹಾರಗದ್ದೆ ಗ್ರಾಮದ ಶಿವಕುಮಾರ್ ಎಂಬುವವರ ಮನೆ ನಿರ್ಮಾಣ ಕೆಲಸ ಮಾಡಿಕೊಂಡು ಅಲ್ಲೇ ಶೆಡ್‍ನಲ್ಲಿ ಪುತ್ರ ವಿಜಯ್ ಜತೆ ವಾಸವಾಗಿದ್ದರು.

ನಿನ್ನೆ ಬೆಳಗಿನ ಜಾವ 1.30ರ ಸಮಯದಲ್ಲಿ ದಂಪತಿ ನಡುವೆ ಯಾವುದೋ ವಿಚಾರವಾಗಿ ಜಗಳ ನಡೆದಿದೆ.ಜಗಳ ವಿಕೋಪಕ್ಕೆ ತಿರುಗಿದಾಗ ದೊಣ್ಣೆಯಿಂದ ಪತ್ನಿ ವಳ್ಳಿ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿ ಪತಿ ರಾಜ ತಲೆಮರೆಸಿಕೊಂಡಿದ್ದಾನೆ.

ಸುದ್ದಿ ತಿಳಿದ ಜಿಘಣಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ರಾಜ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ