ಸಚಿವರಾದ ಸಿ ಎಸ್ ಪುಟ್ಟರಾಜು, ಹೆಚ್ ಡಿ ರೇವಣ್ಣ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆ ಭರ್ಜರಿ ತಯಾರಿ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್ ದಿ ಕುಮಾರಸ್ವಾಮಿ ಆಪ್ತ, ಸಚಿವರಾದ ಸಿಎಸ್ ಪುಟ್ಟರಾಜು, ಹೆಚ್ ಡಿ ರೇವಣ್ಣ ನಿವಾಸ, ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂ ಬೆಳಿಗ್ಗೆ 5 ಗಂಟೆಗೆ ಪುಟ್ಟರಾಜು ಅವರ ಸ್ವಗ್ರಾಮ ಪಾಂಡವಪುರ ತಾಲೂಕಿನ ಚಿನಕುರಳಿ ಮನೆ ಮೇಲೆ ಹಾಗೂ ಅವರ ಅಣ್ಣನ ಮಗ ಅಶೋಕ್ ಅವರ ಮೈಸೂರಿನ ವಿಜಯನಗರದಲ್ಲಿರುವ ಮನೆ ಮೇಲೂ ದಾಳಿ ನೆಡೆದಿದೆ. ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಹಾಸನದ ಮೂರು ಕಡೆ ಐಟಿ ಅಧಿಕಾರಿಗಳು ದಾಳಿಯಾಗಿದ್ದು, ಲೋಕೋಪಯೋಗಿ ಇಲಾಖೆ ಸಚಿವ ಎಚ್​.ಡಿ.ರೇವಣ್ಣ ಅವರ ಆಪ್ತ ನಾರಾಯಣರೆಡ್ಡಿ, ಅಶ್ವತ್ಥ್​ ಹಾಗೂ ರಾಯಗೌಡ ಮನೆ ಮೇಲೆ ದಾಳಿ ನಡೆದಿದೆ. ಲೋಕೋಪಯೋಗಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಕಾರ್ಯನಿರ್ವಾಹಕ ಇಂಜಿನಿಯರ್ ಮಂಜುನಾಥ್​ ಅವರ ವಿಚಾರಣೆ ನಡೆಯಿತು.

I-T officials carry out raids at Karnataka minister’s residence

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ