ಐಟಿ ದಾಳಿ ಮೂಲಕ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಿದ್ದಾರೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಜಿಕಲ್ ದಾಳಿ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಐಟಿ ದಾಳಿ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ, ಐಟಿ ಇಲಾಖೆಯನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಮುಕ್ತವಾಗಿ ಸರ್ಜಿಕಲ್​ ಸ್ಟ್ರೈಕ್​ ಮಾಡಿದ್ದಾರೆ. ಸಂವಿಧಾನಿಕ ಸ್ಥಾನದ ಆಮಿಷ ಒಡ್ಡಿ, ಭ್ರಷ್ಟ ಅಧಿಕಾರಿಯನ್ನು ಬಳಸಿಕೊಂಡು ಪ್ರಧಾನಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಚುನಾವಣಾ ಸಮಯದಲ್ಲಿ ಎದುರಾಳಿಗಳನ್ನು ಬೆದರಿಸಲು ಪ್ರಧಾನಿ ಮೋದಿ ಸರ್ಕಾರಿ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ವಿಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

IT Raide,CM H D Kumaraswamy,PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ