ರೈಲಿಗೆ ಸಿಕ್ಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು

ಬೆಂಗಳೂರು, ಮಾ.31- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಯಶವಂತಪು ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಲ್ಲಸಂದ್ರ-ಗುಬ್ಬಿ ರೈಲ್ವೆ ನಿಲ್ದಾಣಗಳ ಮಧ್ಯೆ ಸುಮಾರು 50 ವರ್ಷದ ಪುರುಷ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ.

ಚಹರೆ: 170 ಸೆಂಟಿಮೀಟರ್ ಎತ್ತರ, ಸಾಧಾರಣ ಶರೀರ, ಕೋಲು ಮುಖ, ತಲೆಯಲ್ಲಿ ಎರಡು ಇಂಚು ಕಪ್ಪು-ಬಿಳಿ ಮಿಶ್ರಿತ ಕೂದಲಿದೆ. ಬಲಗೈನಲ್ಲಿ ಕೆಂಪು ಮಣಿಯುಳ್ಳ ಹಳದಿ ದಾರ ಇದೆ. ತುಂಬು ತೋಳಿನ ಗೆರೆಗಳುಳ್ಳ ಶರ್ಟ್, ಬಿಳಿ ಬಣ್ಣದ ಬನಿಯನ್, ಕಾಖಿ ಬಣ್ಣದ ನಿಕ್ಕರ್ ಧರಿಸಿದ್ದಾನೆ.

ಮೃತನ ದೇಹವನ್ನು ತುಮಕೂರು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ರಾಜಾನುಕುಂಟೆ ರೈಲ್ವೆ ಯಾರ್ಡ್:
ಸುಮಾರು 60 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ರಾಜಾನುಕುಂಟೆ ರೈಲ್ವೆ ಯಾರ್ಡ್ ಬಳಿ ನಡೆದಿದೆ.

ಚಹರೆ: 5.6 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ, ಅಗಲ ಹಣೆ, ತಲೆಯಲ್ಲಿ ಎರಡು ಸೆಂ.ಮೀ.ಕಪ್ಪು ಬಿಳಿ ಮಿಶ್ರಿತ ಕೂದಲಿದೆ.ಮಾಸಲು ಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ತಿಳಿ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿದ್ದಾನೆ.

ಮೃತ ದೇಹವನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ವಾರಸುದಾರರು ಇದ್ದಲ್ಲಿ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಮೊಬೈಲ್ 9480802118 ಸಂಪರ್ಕಿಸಬೇಕೆಂದು ಮನವಿ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ