ಡೈರಿ ಆರೋಪ ಹಿನ್ನಲೆ-ಮಲ್ಲಿಕಾರ್ಜುನ ಖರ್ಗೆಯವರಿಗೆ ಸವಾಲು ಹಾಕಿದ ಯಡಿಯೂರಪ್ಪ

ಬೆಳಗಾವಿ, ಏ.1- ಸಂಜೆಯೊಳಗೆ ನನ್ನ ವಕೀಲರ ಜತೆ ಚರ್ಚಿಸಿ ಕಾನೂನು ಹೋರಾಟ ನಡೆಸಲು ಸಿದ್ಧನಿದ್ದೇನೆ. ಡೈರಿ ಆರೋಪ ಸಾಬೀತಾಗದಿದ್ದರೆ ರಾಜಕೀಯ ನಿವೃತ್ತಿ ಹೊಂದಲು ನೀವು ಸಿದ್ಧರಿದ್ದೀರ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಪ್ರಸ್ತಾಪಿಸಿರುವ ಬಿಜೆಪಿ ನಾಯಕರಿಗೆ 1800 ಕೋಟಿ ರೂ.ನೀಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೀಗಾಗಲೇ ಅದು ಸಾಬೀತಾದರೆ ಸಕ್ರಿಯ ರಾಜಕಾರಣದಿಂದ ದೂರ ಉಳಿಯುತ್ತೇನೆ ಎಂದು ಘೋಷಿಸಿದ್ದೇನೆ. ಆದರೆ, ನೀವು ಇದು ಸುಳ್ಳು ಎಂದು ಸಾಬೀತಾದರೆ ರಾಜಕಾರಣ ತ್ಯಜಿಸುತ್ತೀರ ಎಂದು ಸವಾಲು ಹಾಕಿದ್ದಾರೆ.

ನನಗೆ ಮಾನನಷ್ಟ ಮೊಕದ್ದಮೆ ಹೂಡುವ ಸಲಹೆ ನೀಡುವ ಬದಲು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಗೆ ಸ್ವಲ್ಪ ತಿಳುವಳಿಕೆ ಮಾತುಗಳನ್ನಾಡುವುದನ್ನು ಕಲಿಸಲಿ ಎಂದು ಲೇವಡಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ