ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತಕುಮಾರ್ ನೇಮಕ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜ್ಯ ಬಿಜೆಪಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ತಮ್ಮ ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದು, ತೇಜಸ್ವಿನಿ ಅನಂತ್​ ಕುಮಾರ್​ ಅವರನ್ನು ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲು ಸಂತೋಷವೆನಿಸುತ್ತದೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.

ಕೇಂದ್ರ ಸಚಿವರಾಗಿದ್ದ ಅನಂತ್​ ಕುಮಾರ್​ ಅವರು ನಿಧನರಾದ ಬಳಿಕ ಪತ್ನಿ ತೇಜಸ್ವಿನಿ ಬೆಂಗಳೂರು ದಕ್ಷಿಣ ಲೋಕಸಭಾ ಟಿಕೆಟ್​ ಸಿಗುತ್ತದೆ ಎಂದು ಭಾವಿಸಲಾಗಿತ್ತು.

ಅಲ್ಲದೇ ಈ ಬಗ್ಗೆ ಕಾರ್ಯಕರ್ತರು ಆಶಾಭಾವನೆ ಹೊಂದಿದ್ದರು. ಆದರೆ, ಈ ಬಾರಿ ಬಿಜೆಪಿ ಹೈಕಮಾಂಡ್​ ಏಕಾಏಕಿ ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡುವ ಮೂಲಕ ಕಣಕ್ಕೆ ಇಳಿಸಿದೆ. ಇದರಿಂದ ಬಿಜೆಪಿಯಲ್ಲಿ ಕೆಲ ಅಸಮಾಧಾನಗಳು ಭುಗಿಲೆದ್ದಿದ್ದವು. ಅಲ್ಲದೇ ವರಿಷ್ಠರ ಕ್ರಮಕ್ಕೆ ಬಿಜೆಪಿ ರಾಜ್ಯ ನಾಯಕರು ಕೂಡ ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ತೇಜಸ್ವಿನಿ ಅವರಿಗೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷೆ ಸ್ಥಾನ ನೀಡುವ ಮೂಲಕ ಭಿನ್ನಮತ ಶಮನಕ್ಕೆ ವರಿಷ್ಠರು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

Tejaswini ananthkumar oppointed as state vicepresident of bjp

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ