ದೇಶಾಭಿಮಾನ, ದೇಶ ರಕ್ಷಣೆ ಬಗ್ಗೆ ನಮಗೂ ಅರಿವಿದೆ: ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಯಾವ ಉಗ್ರರ ಪರವಾಗಿ ಕಾಂಗ್ರೆಸ್ ಪಕ್ಷ ಆಗಲಿ ವಿಪಕ್ಷವಾಗಲಿ ಬೆಂಬಲ ಕೊಟ್ಟಿದೆ? ನರೇಂದ್ರ ಮೋದಿ ಅವರ ಭಾಷಣ ಅದು ಒಂದು ಪ್ರಧಾನ ಮಂತ್ರಿಗೆ ಶೋಭೆ ತರುವಂತಹ ಭಾಷಣಗಳಲ್ಲ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ದೇಶ ಒಡೆಯುವ ಮಂದಿಗೆ ಬೆಂಬಲ ನೀಡುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕ ಮಾಜಿ ಪ್ರಧಾನಿ ದೇವೇಗೌಡ ಅವರು ಈ ಬಗ್ಗೆ ತಮ್ಮ ನಿಲುವನ್ನು ತಿಳಿಸಬೇಕು ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಕುಮಾರಸ್ವಾಮಿ, ಉಗ್ರರಿಗೆ ಕಾಂಗ್ರೆಸ್ ಪಕ್ಷ ಆಗಲಿ ವಿಪಕ್ಷವಾಗಲಿ ಬೆಂಬಲ ಕೊಡುವುದಿಲ್ಲ. ನರೇಂದ್ರ ಮೋದಿ ಅವರ ಭಾಷಣ ಅದು ಒಂದು ಪ್ರಧಾನ ಮಂತ್ರಿಗೆ ಶೋಭೆ ತರುವಂತಹ ಭಾಷಣಗಳಲ್ಲ. ಮೋದಿ ಸುಮ್ಮನೆ ಸುಳ್ಳು ಹೇಳಿಕೊಂಡು ಒಡಾದುತ್ತಿದ್ದಾರೆ ಎಂದು ಕಿಡಿಕಾರಿದರು.

ದೇಶದ ಅಭಿಮಾನ ಎಂಬುದು ಮೋದಿ ಅವರೊಬ್ಬರಿಗೆ ಗುತ್ತಿಗೆ ಕೊಟ್ಟಿಲ್ಲ.ನಮಗೂ ದೇಶದ ರಕ್ಷಣೆ ಹೇಗೆ ಮಾಡಬೇಕು ಅಂತ ಅರಿವಿಟ್ಟುಕೊಂಡಿದ್ದೇವೆ. ದೇವೇಗೌಡರು ಯಾವ ರೀತಿ ಪ್ರಧಾನಿಯಾಗಿ ಹೇಗೆ ದೇಶ ಕಾಪಾಡಿದ್ದಾರೆ ಎನ್ನುವುದನ್ನು ಇತಿಹಾಸ ತೆಗೆದು ನೋಡಿದರೆ ಗೊತ್ತಾಗುತ್ತದೆ ಎಂದು ಹೇಳಿದರು.

CM H D Kumaraswamy reacts to modi question

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ