ಕಾಂಗ್ರೇಸಿಗರು ಜೆಡಿಎಸ್ ಪರವಾಗಿ ಕೆಲಸ ಮಾಡುತ್ತಿಲ್ಲ-ಸಚಿವ ಸಾ.ರಾ.ಮಹೇಶ್

ಮೈಸೂರು, ಏ.3- ಮೈತ್ರಿ ಧರ್ಮದ ಪ್ರಕಾರ ಹಾಸನ-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಸಾ.ರಾ.ಮಹೇಶ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು, ಮಂಡ್ಯ ಕ್ಷೇತ್ರದಲ್ಲಿ ಸಮನ್ವಯತೆ ಕೊರತೆಯಿರುವುದು ನಿಜ. ಸಚಿವ ಜಿ.ಟಿ.ದೇವೇಗೌಡರು ಸತ್ಯವನ್ನೇ ಹೇಳಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ ಪರವಾಗಿ ಕಾಂಗ್ರೆಸಿಗರು ಕೆಲಸ ಮಾಡುತ್ತಿಲ್ಲ ತುಮಕೂರಿನಲ್ಲೂ ಇದೇ ರೀತಿಯ ವಾತಾವರಣವಿದೆ.

ಮುಂದಿನ ದಿನಗಳಲ್ಲಿ ಸಮನ್ವಯತೆ ಸುಧಾರಿಸಬಹುದೆಂಬ ಆಶಾಭಾವನೆಯಿದೆ.ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಸ್ಥಳೀಯವಾಗಿ ಅಸಮಾಧಾನಗಳಿವೆ.

ವೈಯಕ್ತಿಕ ಹಿತಾಸಕ್ತಿಗಳು ಹಾಗೂ ಅಹಂನಿಂದಾಗಿ ಪಕ್ಷಗಳಲ್ಲಿ ಹೊಂದಾಣಿಕೆಯಾಗುತ್ತಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿಯವರ ಕುರಿತು ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಕೀಳುಮಟ್ಟದ ರಾಜಕಾರಣ.ಅದನ್ನು ಕೇಂದ್ರ ಸಚಿವ ಸದಾನಂದಗೌಡ ಸಮರ್ಥಿಸಿಕೊಂಡಿರುವುದು ದುರಂತ. ಚುನಾವಣೆಯಲ್ಲಿ ಅಭಿವೃದ್ಧಿ ವಿಷಯಗಳನ್ನು ಕುರಿತು ಚರ್ಚಿಸಬೇಕೆ ಹೊರತು ವೈಯಕ್ತಿಕ ವಿಷಯಗಳನ್ನು ಎಳೆದು ತರಬಾರದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ