ಬಿಜೆಪಿ ಪಕ್ಷವನ್ನು ಮುಸ್ಲೀಮರು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು-ಮಾಜಿ ಡಿ.ಸಿಎಂ.ಕೆ.ಎಸ್.ಈಶ್ವರಪ್ಪ

ಚಿಕ್ಕೋಡಿ, ಏ.3- ಬಿಜೆಪಿ ಪಕ್ಷಕ್ಕೆ ವಿಶ್ವಾಸ ಬರುವಂತೆ ನಡೆದುಕೊಂಡರೆ ಮುಸ್ಲಿಮರಿಗೆ ಟಿಕೆಟ್ ನೀಡುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರು ಬಿಜೆಪಿ ಪಾರ್ಟಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆಗ ಮಾತ್ರ ನಾವು ಅವರಿಗೆ ಟಿಕೆಟ್ ಕೊಡುತ್ತೇವೆ. ನಮಗೆ ವಿಶ್ವಾಸ ಬರುವ ರೀತಿಯಲ್ಲಿ ಅವರು ನಡೆದುಕೊಳ್ಳಬೇಕು ಎಂದು ಹೇಳಿದರು.

ರಾಹುಲ್ ಗಾಂಧಿ ಅಮೇಥಿಯಿಂದ ವಯನಾಡಿಗೆ ಸ್ಥಳಾಂತರಗೊಳ್ಳುತ್ತಿರುವುದರ ಬಗ್ಗೆ ವ್ಯಂಗ್ಯವಾಡಿದ ಈಶ್ವರಪ್ಪ, ಅಮೇಥಿಯಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿರುವುದರಿಂದ ವಯನಾಡಿಗೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು.

ಸುಮಲತಾ ಅವರು ನಾಯ್ಡು ಎಂದು ಶಿವರಾಮೇಗೌಡರು ಹೇಳಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಜಾತ್ಯತೀತ ಪಕ್ಷವಾದ ಜೆಡಿಎಸ್‍ನವರು ನಾಯ್ಡು, ಒಕ್ಕಲಿಗ ಎಂದು ಹೇಳುತ್ತಿದ್ದಾರೆ.ಬಿಜೆಪಿ ರಾಷ್ಟ್ರೀಯವಾದಿ ಪಕ್ಷ ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳನ್ನು ರಾಜ್ಯದ ಜನ ತಿರಸ್ಕರಿಸಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ