ಮುಖ್ಯಮಂತ್ರಿಗೆ ಉತ್ತರ ಕರ್ನಾಟಕಕ್ಕೆ ಬರುವ ನೈತಿಕತೆಯಿಲ್ಲ-ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ

ಕಾರವಾರ, ಏ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಉತ್ತರ ಕರ್ನಾಟಕಕ್ಕೆ ಬರುವ ನೈತಿಕತೆ ಇಲ್ಲ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ಅನಂತ್‍ಕುಮಾರ್ ಹೆಗಡೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿಗಳು ಇಲ್ಲಿಗೆ ಬಂದಾಗ ಇಲ್ಲಿನ ಸಮಸ್ಯೆಯನ್ನೂ ಒಂದು ವಾರದಲ್ಲಿ ಬಗೆಹರಿಸುವ ಭರವಸೆ ನೀಡಿದ್ದರು.

ಆದರೆ 1ವರ್ಷವಾದರೂ ಬಗೆಹರಿಸಿಲ್ಲ ಅವರಿಗೆ ಇಲ್ಲಿಗೆ ಬರುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ