ಬಿಜೆಪಿ ಮುಖಂಡ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿದ ಸುಮಲತಾ

ಮಂಡ್ಯ, ಏ.5-ಬಿಜೆಪಿ ಮುಖಂಡ ಸಿದ್ದರಾಮಯ್ಯ ಮನೆಗೆ ಸುಮಲತಾ ಅಂಬರೀಷ್ ಭೇಟಿ ಮಾಡಿ ಚರ್ಚಿಸಿದರು.

ಮಂಡ್ಯ ತಾಲೂಕಿನ ಯತ್ತಗದ ಹಳ್ಳಿಯ ಸಿದ್ದರಾಮಯ್ಯ ಮನೆಗೆ ತೆರಳಿದ್ದ ಅವರು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.

ಕಳೆದ ಬಾರಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿದ್ದು ಸಿದ್ದರಾಮಯ್ಯ ಈ ಬಾರಿಯೂ ಸ್ಪರ್ಧಾಕಾಂಕ್ಷಿಯಾಗಿದ್ದರು. ಆದರೆ ಸ್ವತಂತ್ರ ಅಭ್ಯರ್ಥಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲಿಸಿದ್ದರಿಂದ ಯಾರನ್ನು ಬಿಜೆಪಿ ಕಣಕ್ಕಿಳಿಸಲಿಲ್ಲ ಈಗಾಗಲೇ ಸುಮಲತಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ