ಖೂಬಾ ಪರ ಸಹೋದರ ಬಿರುಸಿನ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಭಗವಂತ ಖೂಬಾ ಪರವಾಗಿ ಸಹೋದರ, ಯುವ ಮುಖಂಡ ಜಗದೀಶ್ ಖೂಬಾ ಶನಿವಾರ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.
ಚಾಂಗಲೇರಾ, ಕರಕನಳ್ಳಿ, ಉಡಮನಳ್ಳಿ, ತಮಕುಂಟಾ, ಬೇಮಳಖೇಡಾ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ಬಿರು ಬಿಸಿಲಿನಲ್ಲಿ ಪ್ರಚಾರ ನಡೆಸಿದರು.
ಕೇಂದ್ರದಲ್ಲಿ ಸ್ಥಿರ ಸರ್ಕಾರ ಬರಬೇಕಾದರೆ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲಿಸಿ ಎಂದು ಮನವಿ ಮಾಡಿದರು.
ದೇಶ ಉಳಿಯಬೇಕಾದರೆ ಮೋದಿಗೆ ಮತ್ತೇ ಪ್ರಧಾನಿ ಮಾಡುವುದು ಅವಶ್ಯಕವಾಗಿದೆ. ಮೋದಿಗೆ ಅಧಿಕಾರದ ಅಗತ್ಯ ಇಲ್ಲ. ದೇಶದ ಜನರಿಗೆ ಮೋದಿ ಅಗತ್ಯ ವಾಗಿದೆ. ಹೀಗಾಗಿ ಬಿಜೆಪಿ ಗೆ ಬೆಂಬಲಿಸುವ ಮೂಲಕ ಅಭ್ಯರ್ಥಿ ಭಗವಂತ ಖೂಬಾ ಅವರಿಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.
ಐದು ವರ್ಷಗಳ ಅವಧಿಯಲ್ಲಿ ಖೂಬಾ ಅವರು ಸಾವಿರಾರು ಕೋಟಿ ಅನುದಾನ ತಂದು ರಾಷ್ಟ್ರೀಯ ಹೆದ್ದಾರಿ ಸೇರಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ ಎಂದರು.
ದೇಶದ ಆಂತರಿಕ, ಬಾಹ್ಯ ಸಂರಕ್ಷಣೆ ತೀರಾ ಅಗತ್ಯ ವಾಗಿದೆ. ಉಗ್ರರ ಉಪಟಳ ಸದೆಬಡಿಯುವ ಏಕೈಕ ವ್ಯಕ್ತಿ ಮೋದಿ. 2014ರಲ್ಲಿ ಒಂದು ಲಕ್ಷ ಮತಗಳ ಅಂತರದಿಂದ ಗೆದ್ದಿರುವ ಖೂಬಾ, ಈ ಬಾರಿ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ