ಪ್ರಧಾನಿ ಮೋದಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ-ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಏ.7- ನರೇಂದ್ರ ಮೋದಿ ಸುಳ್ಳು ಆಶ್ವಾಸನೆ ನೀಡುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. 2014ರ ಚುನಾವಣೆಯಲ್ಲಿ ಮಾಡಿದಂತಹ ಭಾಷಣ ಈಗ ಮಾಡುತ್ತಿಲ್ಲ. ಅವರಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಯಾವುದೇ ತಾಕತ್ ಇಲ್ಲವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಕಾಶ್ಮೀರ ದಾಳಿಯೊಂದೆ ಅಜೆಂಡಾ ಆಗಿದೆ.ಅವರಿಗೆ ಹೇಳಲಿಕ್ಕೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ.ಆದ್ದರಿಂದಲೇ ಅದೇ ಒಂದು ವಿಷಯವಾಗಿ ಇಟ್ಟುಕೊಂಡಿದ್ದಾರೆ.

ಸುರೇಶ್ ಅಂಗಡಿಯೂ ಸಹ ಹದಿನೈದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ.ಆದ್ದರಿಂದಲೇ ಎಲ್ಲೆಡೆ ಮೋದಿ ನೋಡಿ ಮತ ನೀಡಿ ಎಂದು ಹೇಳುತ್ತಿದ್ದಾರೆ.ಅವರ ಅಭಿವೃದ್ಧಿ ಕಾರ್ಯ ಶೂನ್ಯ ಎಂದರು.

ಬೆಳಗಾವಿ ಓವರ್ ಬ್ರಿಡ್ಜ್ ನಿರ್ಮಾಣ ಮಾಡಿಸಿದ್ದೇನೆ ಎಂದು ಹೇಳುತ್ತಾರೆ.ಆದರೆ ಅದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೇ. 50ರಷ್ಟು ಅನುದಾನದಲ್ಲಿ ನಿರ್ಮಿಸಲಾಗಿದೆ ಇದಕ್ಕೆ ಕೇಂದ್ರ ಸರ್ಕಾರ ಮಾತ್ರ ಅನುದಾನ ನೀಡಿಲ್ಲವೆಂದರು.

ಯೂಥ್ ಕಾಂಗ್ರೆಸ್‍ನ ಪ್ರತಿಯೊಬ್ಬ ಸದಸ್ಯರು ಕ್ಷೇತ್ರದ ಪ್ರತಿಯೊಂದು ಮನೆ ಮನೆಗೆ ತೆರಳಿ ಮೋದಿಯವರ ವೈಫಲ್ಯಗಳನ್ನು ಹೇಳುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಡಿವೈಸಿಯ(ಯೂಥ್ ಕಾಂಗ್ರೆಸ್ ) ಅಧ್ಯಕ್ಷ ಪೈಜಾನ್ ಶೆಟ್, ಫೀರೋಜ್ ಸೇಟ್, ಜಿಲ್ಲಾಧ್ಯಕ್ಷ ನಾವಲಗಟ್ಟಿ, ರಾಜು ಶೆಟ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ