ಜೆಡಿಎಸ್ ಮುಖಂಡರಿಗೆ ಚುನಾವಣಾ ತಂತ್ರಗಳ ಬಗ್ಗೆ ಸಿ.ಎಂ.ಕುಮಾರಸ್ವಾಮಿ ಮಾರ್ಗದರ್ಶನ

ಮಂಡ್ಯ, ಏ.8-ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಬೂತ್‍ಮಟ್ಟದಿಂದ ಪ್ರಚಾರ ಕೈಗೊಳ್ಳಲು ಜೆಡಿಎಸ್ ಮುಖಂಡರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಖಾಸಗಿ ಹೊಟೇಲ್‍ನಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಸಿದ ಮುಖ್ಯಮಂತ್ರಿ ಮಂಡ್ಯಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ನಿಖಿಲ್‍ಕುಮಾರಸ್ವಾಮಿ ಗೆಲುವಿಗೆ ಕೈಗೊಳ್ಳಬೇಕಾದ ಚುನಾವಣಾ ತಂತ್ರಗಳ ಬಗ್ಗೆ ಮಾರ್ಗದರ್ಶನ ಮಾಡಿದ್ದಾರೆ.

ತಳಮಟ್ಟದಿಂದ ಮುಖಂಡರು, ಕಾರ್ಯಕರ್ತರು ಚುನಾವಣೆಯಲ್ಲಿ ಶಕ್ತಿ ಮೀರಿ ಕೆಲಸ ಮಾಡಬೇಕು.ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲುವಂತೆ ಮಾಡಬೇಕು. ಗ್ರಾ.ಪಂಚಾಯ್ತಿ ಸದಸ್ಯರು ಮತ್ತು ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಲೋಪವಾಗದಂತೆ ಸಾಧನೆಗಳು ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ ಮತಯಾಚನೆ ಮಾಡಬೇಕು. ಮತದಾರರ ಮನಸ್ಸನ್ನು ಮೈತ್ರಿ ಅಭ್ಯರ್ಥಿ ಪರವಾಗಿ ಸೆಳೆಯಲು ಪೂರಕವಾದ ರೀತಿಯಲ್ಲಿ ಚುನಾವಣಾ ಪ್ರಚಾರ ಇರಬೇಕು ಎಂದು ಸಲಹೆ ಮಾಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ