ಸುಮಲತಾ ಪ್ರಚಾರ ನಡೆಸುತ್ತಿದ್ದ ವೇಳೆ-ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಗುಂಪು

ಮಂಡ್ಯ,ಏ.8-ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುದೇವನಹಳ್ಳಿಯಲ್ಲಿ ನಡೆದಿದೆ.

ನಿನ್ನೆ ಗುರುದೇವನಹಳ್ಳಿಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದೆ.

ಘಟನೆಯಲ್ಲಿ ಗಾಯಗೊಂಡಿರುವ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ಘಟನೆಗೆ ಯಾರು ಜವಾಬ್ದಾರಿ ಎಂದು ಬೇಸರ ವ್ಯಕ್ತಪಡಿಸಿದ ಅವರು, ತಾಳ್ಮೆಯಿಂದ ಇದ್ದು ಶಾಂತಿಯುತವಾಗಿ ಚುನಾವಣೆ ನಡೆಯಬೇಕೆಂಬುದು ನಮ್ಮ ಅಪೇಕ್ಷೆ.

ನಿಮಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು. ದುಡುಕಿ ಯಾವುದೇ ನಿರ್ಧಾರ ಕೈಗೊಳ್ಳಬೇಡಿ ಎಂದರು.

ಪ್ರಸ್ತುತ ನಮ್ಮ ಸರ್ಕಾರ ಅಧಿಕಾರದಲ್ಲಿದೆ.ನಾವು ಏನೇ ಮಾಡಿದರೂ ತಪ್ಪಾಗುತ್ತದೆ ಎಂದು ಗಾಯಾಳುಗಳಿಗೆ ಸಮಾಧಾನ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ